ಜನ ನೋಟ
ಶಿವಮೊಗ್ಗ

ಮಠಮಾನ್ಯಗಳ ಶೈಕ್ಷಣಿಕ ಸೇವೆ ಸಮಾಜಕ್ಕೆ ಮಾದರಿ : ಸಿ.ಎಸ್. ಷಡಾಕ್ಷರಿ

ಶಿವಮೊಗ್ಗ : ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸುವಲ್ಲಿ ಮಠಮಾನ್ಯಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ಆರಂಭವಾದ ಚುಂಚಾದ್ರಿ ಕಪ್ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದಿಂದ ಸಾಧ್ಯವಾಗದ ಹಲವು ಕಾರ್ಯಗಳನ್ನು ಮಠಮಾನ್ಯಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡುತ್ತಿವೆ ಎಂದರು.

ಇಂದಿನ ಸಂದರ್ಭದಲ್ಲಿ ಶಿಕ್ಷಣದ ಜತೆಗೆ ಸಂಸ್ಕಾರವೂ ಅಗತ್ಯವಾಗಿದೆ. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳು ತಮ್ಮ ಶಾಲೆಗಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳೆಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಮಠಮಾನ್ಯಗಳು ರಾಜ್ಯದ ಶೈಕ್ಷಣಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿವೆ. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳು ಪಠ್ಯಕ್ರಮದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವುದು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಹೇಳಿದರು.

ಚುಂಚಾದ್ರಿ ಕಪ್ ವಾಲಿಬಾಲ್ ಪಂದ್ಯಾವಳಿ ಹಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವುದು ಸಂತಸದ ಸಂಗತಿ. ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ, ಶಿಸ್ತು ಹಾಗೂ ತಂಡದ ಮನೋಭಾವ ಬೆಳೆಸಲು ಸಹಕಾರಿ. ಸೋಲು-ಗೆಲುವಿಗಿಂತ ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಮುಖ್ಯ ಎಂದು ಷಡಾಕ್ಷರಿ ಹೇಳಿದರು.

ಕಾರ್ಯಕ್ರಮದಲ್ಲಿ ನಾದಮಯಾನಂದ ಸ್ವಾಮೀಜಿ, ಕೊಳಗಿ ವಾಸಪ್ಪಗೌಡ, ಡಿಡಿಪಿಐ ಮಂಜುನಾಥ್, ಬಿಇಒ ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಶಿವಮೊಗ್ಗದಲ್ಲಿ ಡಿಸಿ ಕಚೇರಿ ಮುತ್ತಿಗೆ ಯತ್ನ

JanaNota Editor

ಶಿವಮೊಗ್ಗದಲ್ಲಿ ಶುರುವಾಯ್ತು ‘ಟಾಕ್ಸಿಕ್’ ಹವಾ

JanaNota Editor

2018ರ ಮತದಾರರ ಹೆಚ್ಚಳದ ಬಗ್ಗೆ ತನಿಖೆಯಾಗಲಿ : ಕೆ.ಬಿ. ಪ್ರಸನ್ನಕುಮಾರ್

JanaNota Editor