ಬೆಂಗಳೂರು: ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಅವರನ್ನು ವಿಧಾನ ಪರಿಷತ್ತಿನ ಅರ್ಜಿಗಳ ಸಮಿತಿಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸಭಾಪತಿಗಳು ಆದೇಶಿಸಿದ್ದಾರೆ.
ಸಾರ್ವಜನಿಕರಿಂದ ಬರುವ ಮನವಿ ಹಾಗೂ ಅರ್ಜಿಗಳನ್ನು ಪರಿಶೀಲಿಸಿ, ಸರ್ಕಾರದ ಗಮನಕ್ಕೆ ತರುವ ಮಹತ್ವದ ಜವಾಬ್ದಾರಿಯನ್ನು ಈ ಸಮಿತಿ ಹೊಂದಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನೇತ್ರಾವತಿ, ಸುಜಾತ ಹಾಗೂ ಪುಷ್ಪಲತಾ ಅವರು ಬಲ್ಕೀಶ್ ಬಾನು ಅವರನ್ನು ಅಭಿನಂದಿಸಿ, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವ ಸಮಿತಿಯಲ್ಲಿ ಅವರ ಸೇವೆ ಪರಿಣಾಮಕಾರಿಯಾಗಿರಲಿ ಎಂದು ಶುಭ ಹಾರೈಸಿದರು.
